ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ 2 ಬಿಬಿಎಂಪಿ ಕಂದಾಯ ಸಿಬ್ಬಂದಿ: ಓರ್ವ ಪರಾರಿ

Prasthutha|

ಬೆಂಗಳೂರು: 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬರು ಪರಾರಿಯಾಗಿದ್ದಾರೆ.

- Advertisement -

ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್​ಡಿಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್​ ಸುರೇಶ್ ದತ್ತಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬಾತನಿಂದ 1 ಲಕ್ಷದ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿಗಳಿಬ್ಬರನ್ನು ಬಂಧನ ಮಾಡಲಾಗಿದೆ.

Join Whatsapp