ಬಿ.ಸಿ.ರೋಡ್ ಆಸಿಫ್ ಕೊಲೆ ಪ್ರಕರಣ: ಆರೋಪಿಗಳ ಬಂಧನ !

Prasthutha|

- Advertisement -

ಬಂಟ್ವಾಳ: ಬಿ.ಸಿ. ರೋಡಿನ ಶಾಂತಿ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.‌

ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ ಮುಹಮ್ಮದ್ ನೌಫಾಲ್ ಹಾಗೂ ಮುಹಮ್ಮದ್ ನೌಶೀರ್ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

- Advertisement -

ಬಿಸಿರೋಡಿನ‌ ಬಸ್ ಡಿಪೋ ಬಳಿ ಬೈಕ್ ಹಾರ್ನ್ ವಿಷಯದಲ್ಲಿ ಇತ್ತಂಡಗಳ ನಡುವೆ ವಾಗ್ವಾದ ಉಂಟಾಗಿದೆ ಎನ್ನಲಾಗಿದೆ. ಬಳಿಕ‌ ಜಗಳ ತಾರಕಕ್ಕೇರಿದ್ದು ಬಿಸಿರೋಡ್ ಶಾಂತಿ ಅಂಗಡಿ ನಿವಾಸಿ ಆಸಿಫ್ ಎಂಬವರನ್ನು ಚೂರಿ ಇರಿದು ಕೊಲೆ ಮಾಡಲಾಗಿತ್ತು.

ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ತೀವ್ರ ರಕ್ತಸ್ರಾವ ದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.‌

Join Whatsapp