ಪ್ರಚೋದನಕಾರಿ ಹೇಳಿಕೆಯಿಂದ ಉದ್ವಿಗ್ನಗೊಂಡಿದ್ದ ಬಿ.ಸಿ. ರೋಡ್​ ಶಾಂತ

Prasthutha|


- Advertisement -

ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ

ಪೊಲೀಸರು ಬಿ.ಸಿ.ರೋಡ್​ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್​​ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

- Advertisement -

ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಂಘ ಪರಿವಾರದ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ‌.



Join Whatsapp