ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ಗೆ ಬಿಸಿಸಿಐ 1 ಕೋಟಿ‌ ರೂ. ನೆರವು

Prasthutha|

ನವದೆಹಲಿ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಬಿಸಿಸಿಐ (ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ) ಕಾರ್ಯದರ್ಶಿ ಜಯ್ ಶಾ 1 ಕೋಟಿ ರೂ. ನೆರವು ಘೋಷಿಸಿದ್ದಾರೆ.

- Advertisement -

ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಜಯ್‌ಶಾ, ಬಿಸಿಸಿಐ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡುತ್ತದೆ ಮತ್ತು ಗಾಯಕ್ವಾಡ್ ಈ ಹಂತದಿಂದ ಬಲವಾಗಿ ಹೊರಬರುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಗಾಯಕ್ವಾಡ್ ಅವರ ಸ್ಥಿತಿಯನ್ನು ಭಾರತದ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಈ ವರ್ಷದ ಆರಂಭದಲ್ಲಿ ಬೆಳಕಿಗೆ ತಂದಿದ್ದರು. ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಜೀವನಕ್ಕಾಗಿ ಹೋರಾಡುತ್ತಿದ್ದಾರೆ ಮತ್ತು ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಾಟೀಲ್ ಬಹಿರಂಗಪಡಿಸಿದ್ದರು.

- Advertisement -

ಭಾರತದ ಮಾಜಿ ಬ್ಯಾಟ್ಸ್ಮನ್ ದಿಲೀಪ್ ವೆಂಗ್ಸರ್ಕರ್ ಕೂಡ ಬಿಸಿಸಿಐ ಖಜಾಂಚಿ ಆಶಿಶ್ ಸೆಲಾರ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದಾರೆ. 1983 ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಕೂಡ ಆರ್ಥಿಕ ಸಹಾಯಕ್ಕಾಗಿ ಬಿಸಿಸಿಐಗೆ ಮನವಿ ಮಾಡಿದ್ದರು. ಮಾಜಿ ಕ್ರಿಕೆಟಿಗರಾದ ಮೊಹಿಂದರ್ ಅಮರನಾಥ್, ಸುನಿಲ್ ಗವಾಸ್ಕರ್, ಸಂದೀಪ್ ಪಾಟೀಲ್ ಅವರೊಂದಿಗೆ ಗಕೇವಾಡ್ ಅವರಿಗೆ ಹಣವನ್ನು ವ್ಯವಸ್ಥೆ ಮಾಡಲು ನೋಡುತ್ತಿರುವುದಾಗಿ ಕಪಿಲ್ ಮಾಹಿತಿ ನೀಡಿದ್ದರು.



Join Whatsapp