ಡಾ. ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ; ಸಿಎಂ ಬೊಮ್ಮಾಯಿ ಅವರಿಂದ ನಿವೇಶನ ಕ್ರಯಪತ್ರ ಹಸ್ತಾಂತರ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು ಅದರ ಕ್ರಯ ಪತ್ರವನ್ನು ಇಂದು ಬೆಂಗಳೂರಿನಲ್ಲಿ ಹಸ್ತಾಂತರಿಸಿದರು.

- Advertisement -

ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಡಾ. ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನದ ಕರಾರು ಪತ್ರ ನೀಡಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ.

- Advertisement -

ಕೆಲವು ದಿನಗಳ ಹಿಂದೆ ಡಾ. ಸಾಲುಮರದ ತಿಮ್ಮಕ್ಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು.

Join Whatsapp