ರೈತನ ಮೇಲೆ ಕರಡಿ ದಾಳಿ; ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

Prasthutha|

ತುಮಕೂರು: ರೈತನೊಬ್ಬನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಮಿಡಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

 ಐಡಿ ಹಳ್ಳಿ ಗ್ರಾಮದ ಮಲ್ಲೆ ರಂಗಪ್ಪ(57) ಎಂಬ ರೈತ ಕರಡಿ ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಮಲ್ಲೆ ರಂಗಪ್ಪ ಮೇಲೆ ಕರಡಿ ಭೀಕರ ದಾಳಿ ನಡೆಸಿದ್ದು, ಗಾಯಾಳುವನ್ಮು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿಯುತ್ತಿದ್ದು ಗಾಯಾಳು ರಂಗಪ್ಪ ಚೇತರಿಸಿಕೊಳ್ಳುತ್ತಿದ್ದಾರೆ.

- Advertisement -

ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆದಿದೆ ಎಂದು ದೂರಿದ್ದಾರೆ.

Join Whatsapp