Home ಕರಾವಳಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಮರುದ್ದೀನ್ ಸಾಲ್ಮರ ನೇಮಕ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಮರುದ್ದೀನ್ ಸಾಲ್ಮರ ನೇಮಕ

ಮಂಗಳೂರು: ಕರ್ನಾಟಕ ಸರಕಾರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದಲ್ಲಿರುವ, ಕರ್ನಾಟಕ ರಾಜ್ಯ ಬ್ಯಾರಿ ಸಾಹಿತ್ಯ ಅಕಾಡೆಮಿಯ, ಸದಸ್ಯರನ್ನಾಗಿ ಪುತ್ತೂರಿನ ಸಾಹಿತಿ, ಕವಿ ಮತ್ತು ಹಾಡುಗಾರ, ಕಮರುದ್ದೀನ್ ಸಾಲ್ಮರ ಅರವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ,ಅಧ್ಯಕ್ಷ ರಹೀಮ್ ಉಚ್ಚಿಲ್ ನೇಮಕಗೊಳಿಸಿ ಆದೇಶಿಸಿದ್ದಾರೆ.

 ಕಮರುದ್ದಿನ್ ಸಾಲ್ಮರ ಅವರು ಹಲವಾರು ವರ್ಷಗಳಿಂದ ಸಾಹಿತ್ಯ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸೌಹಾರ್ದ ಹಾಡುಗಳು ಮೂಲಕ ಪ್ರಸಿದ್ಧರಾಗಿರುತ್ತಾರೆ. ಇವರು ರಚಿಸಿ ಹಾಡಿದ ” ಎವು ಡೆ ವುಳ್ಳೆ ನೀ” ಎಂಬ ಬ್ಯಾರಿ ಹಾಡುಗಳನ್ನು ಒಳಗೊಂಡ ಕ್ಯಾಸೆಟ್ ಈಗಲೂ ಜನಪ್ರಿಯವಾಗಿದೆ. ಇವರು ಪುತ್ತೂರು ಸಾಲ್ಮರ ನಿವಾಸಿಯಾಗಿದ್ದು, ಸಾಲ್ಮರ ಮನೆತನದ, ದಿವಂಗತ ಅಬ್ದುಲ್ ರಹಿಮಾನ್ ಹಾಗೂ ನಫೀಸಾ ದಂಪತಿ ಸುಪುತ್ರ.

Join Whatsapp
Exit mobile version