ಬೆಳಗಾವಿ ಬಿಜೆಪಿ ಕಾರ್ಪೊರೇಟರ್ ಬಂಧನ: ಹಿಂಡಲಗಾ ಜೈಲಿಗೆ ಶಿಫ್ಟ್

Prasthutha|

ಬೆಳಗಾವಿ: ರಾತ್ರೋರಾತ್ರುಮಿ ಬೆಳಗಾವಿ ಪಾಲಿಕೆ ಬಿಜೆಪಿ ಸದಸ್ಯ ಅಭಿಜಿತ್ ಜವಳಕರ್‌ನನ್ನು ಬಂಧಿಸಲಾಗಿದೆ.ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ. ಅಭಿಜಿತ್ ಜವಳಕರ್ ಬಂಧಿತ.

- Advertisement -

ನವೆಂಬರ್ 23ರಂದು ಮೊಬೈಲ್ ಟವರ್ ಅನುಮತಿ ವಿಚಾರಕ್ಕೆ ಬೆಳಗಾವಿಯ ಭಾಗ್ಯನಗರದಲ್ಲಿನ ಗಲಾಟೆ ನಡೆದಿತ್ತು. ಈ ಸಂಬಂಧ ಹಲ್ಲೆ ಮಾಡಿದ್ದ ರಮೇಶ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿತ್ತು. ಈ ಸಂಬಂಧ ಅಭಿಜಿತ್ ಜವಳಕರ್ ನನ್ನು ಕೂಡ ಬಂಧಿಸುವಂತೆ ಎಂಇಎಸ್ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.

ಬೆಳಗಾವಿಯಲ್ಲಿ ಪಾಲಿಕೆ ಸದಸ್ಯ ಅಭಿಜಿತ್ ಬಂಧನ ಆಗುತ್ತಿದ್ದಂತೆ ಬಿಜೆಪಿ ಮುಖಂಡರಿಗೆ ಕರೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಟಿಳಕವಾಡಿಯನ್ನು ತಡರಾತ್ರಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

Join Whatsapp