ಬೆಳಗಾವಿ| ತಾರಕಕ್ಕೇರಿದ ಗಡಿ ಗಲಾಟೆ; ನಗರದ ಸುತ್ತ ಪೊಲೀಸ್ ಸರ್ಪಗಾವಲು

Prasthutha|

ಬೆಳಗಾವಿ: ಕನ್ನಡ ಪರ ಸಂಘಟನೆಗಳು ಹಾಗೂ ಮಹಾರಾಷ್ಟ್ರದ ಎಂಇಎಸ್‌ ಕಾರ್ಯಕರ್ತರು ನಗರಕ್ಕೆ ನುಗ್ಗುವ ಹಿನ್ನೆಲೆಯಲ್ಲಿ, ಬೆಳಗಾವಿಯ ಗಡಿಯ ಎಲ್ಲ 22 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು, 1,000 ಪೊಲೀಸರನ್ನು ಚೆಕ್‌ಪೋಸ್ಟ್‌ ಸ್ಥಳದಲ್ಲಿ ನಿಯೋಜಿಸಲಾಗಿದೆ.

- Advertisement -


ಕರ್ನಾಟಕ– ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡು ರಾಜ್ಯದಲ್ಲಿ 865 ಹಳ್ಳಿಗಳು, ಮಹಾರಾಷ್ಟ್ರದಲ್ಲಿ 220 ಹಳ್ಳಿಗಳು ಇವೆ. ಗಡಿ ಗಲಾಟೆ ತಾರಕಕ್ಕೇರಿದ ಕಾರಣ ಈ ಎಲ್ಲ ಹಳ್ಳಿಗಳಲ್ಲೂ ಈಗ ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ.


ಮಹಾರಾಷ್ಟ್ರದಿಂದ ಸಚಿವರು, ಎಂಇಎಸ್‌, ಶಿವಸೇನೆ ಕಾರ್ಯಕರ್ಯರು ಪ್ರವೇಶಿಸದಂತೆ ಕರ್ನಾಟಕ ಪೊಲೀಸರು ಭದ್ರತೆ ನಡೆಸಿದ್ದು, ಕನ್ನಡ ಸಂಘಟನೆಗಳ ಕಾರ್ಯಕರ್ತರು ಮಹಾರಾಷ್ಟ್ರ ಪ್ರವೇಶ ಮಾಡದಂತೆ ಗಡಿಗಳಲ್ಲಿ ಅಲ್ಲಿನ ಪೊಲೀಸರೂ ಭದ್ರತೆ ಮಾಡಿಕೊಂಡಿದ್ದಾರೆ.

- Advertisement -


ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಪಗಾವಲು ನಿಂತಿರುವ 500ಕ್ಕೂ ಹೆಚ್ಚು ಪೊಲೀಸರು ಪ್ರತಿಯೊಂದು ವಾಹನವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದ ಬಳಿಕವೇ ಗಡಿಯೊಳಗೆ ಬಿಡುತ್ತಿದ್ದಾರೆ.


ಬೆಳಗಾವಿ, ಖಾನಾಪುರ, ನಿಪ್ಪಾಣಿ, ಹುಕ್ಕೇರಿ, ಚಿಕ್ಕೋಡಿ, ಕಾಗವಾಡ ತಾಲೂಕುಗಳಲ್ಲಿ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳಲ್ಲೂ ಪೊಲೀಸರು ಕಾವಲು ನಿಂತಿದ್ದಾರೆ.


ಕನ್ನಡ ಸಂಘಟನೆಗಳ ಕಾರ್ಯಕರ್ತರು ಹಾಗೂ ಎಂಇಎಸ್‌ ಇಬ್ಬರಿಗೂ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಜಿಲ್ಲೆಯಲ್ಲಿ ಸಿಆರ್‌ಪಿಸಿ 144(3) ಅಡಿ ನಿಷೇಧಾಜ್ಞೆ ಇರುವ ಕಾರಣ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಿಳಿಸಿದ್ದಾರೆ.



Join Whatsapp