ಡಿ.4ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

Prasthutha|

ಬೆಳಗಾವಿ: ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಶುರುವಾಗಲಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್, ಅಧಿವೇಶನದ ಮೊದಲ ದಿನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ. ರೈತರ ವಿವಿಧ ಬೇಡಿಕೆ ಗಳ ಈಡೇರಿಸಲು ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ. ಆದ್ರೆ, ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.



Join Whatsapp