ಬೆಳಗಾವಿ: ಕಾರ್ಖಾನೆ ಕಾರ್ಮಿಕನ ಮೂಳೆಗಳನ್ನು ಕೈಚೀಲದಲ್ಲಿ‌ ನೀಡಿದ್ದಕ್ಕೆ ಆಕ್ರೋಶ

Prasthutha|

ಬೆಳಗಾವಿ: ಬೆಳಗಾವಿಯ ಸ್ನೇಹಂ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆಗೆ ಬೆಂಕಿ ಬಿದ್ದ ಘಟನೆಯಲ್ಲಿ ಸಜೀವ ದಹನವಾಗಿದ್ದ ಯುವಕನ ಮೂಳೆಗಳು16 ಗಂಟೆಗಳ ಕಾರ್ಯಾಚರಣೆ ಬಳಿಕ ಲಭ್ಯವಾಗಿದ್ದು,ಅವುಗಳನ್ನು ಕೈಚೀಲದಲ್ಲಿ ಹಾಕಿ ಅವರ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿರುವುದಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

- Advertisement -

ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ (19) ಅವರ ಮೃತದೇಹದ ಅವಶೇಷಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ಅವರ ತಂದೆ ಸಣ್ಣಗೌಡ ಅವರ ಕೈಗೆ ಕೊಟ್ಟಿದ್ದಾರೆ.

ಮನೆಯ ನಿರ್ವಹಣೆ ಜವಾಬ್ದಾರಿ ಹೊತ್ತು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಯಲ್ಲಪ್ಪ ಕಾರ್ಖಾನೆಗಾದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದು, ಆತನ ಸುಟ್ಟು ಕರಕಲಾಗಿ ಮೂಳೆಗಳು ಮಾತ್ರ ಸಿಕ್ಕಿದೆ‌. ಘಟನೆ ಸಮಯದಲ್ಲಿ ಲಿಫ್ಟ್‌ನಲ್ಲಿದ್ದ ಯಲ್ಲಪ್ಪ ಅಲ್ಲಿಯೇ ಜೀವಂತ ಸುಟ್ಟು ಹೋಗಿದ್ದರು.

- Advertisement -

ಜೆಸಿಬಿ ಮೂಲಕ ಗೋಡೆ ಹೊಡೆದು ಸುಟ್ಟು ಕರಕಲಾಗಿದ್ದ ಯಲಪ್ಪನ ದೇಹದ ಮೂಳೆಗಳನ್ನು ಹೊರ ತೆಗೆದಿದ್ದಾರೆ. ಬಳಿಕ ಕುಟುಂಬಸ್ಥರು, ತಹಶೀಲ್ದಾರ್‌, ಡಿಎಚ್‌ಒ ಸ್ಥಳ ಪಂಚನಾಮೆ ಮಾಡಿ ಮೂಳೆಯೊಂದನ್ನು ಡಿಎನ್‌ಎ ಟೆಸ್ಟ್‌ಗೆ ಎಫ್‌ಎಸ್‌ಎಲ್ ತಂಡ ರವಾನೆ ಮಾಡಿತು. ಬಳಿಕ ಉಳಿದ ಮೂಳೆಗಳನ್ನು ಕುಟುಂಬಸ್ಥರಿಗೆ ಚೀಲದಲ್ಲಿ ನೀಡಲಾಗಿದ್ದು,

ಸಾವನ್ನಪ್ಪಿದ ಮಗನ ಮೂಳೆಗಳನ್ನು ಕೈಯಲ್ಲಿ ಹಿಡಿದು ತಂದೆ ಹಾಕಿದ್ದು, ಮತ್ತೊಂದೆಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ರೀತಿ ಕೈ ಚೀಲದಲ್ಲಿ ಮೂಳೆಗಳನ್ನು ಹಾಕಿ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಮೃತ ಯುವಕನಿಗೆ ಕನಿಷ್ಠ ಮಟ್ಟದ ಗೌರವ ನೀಡದೆ, ಮೃತದೇಹ ಸಾಗಾಣೆಗೆ ವಾಹನ ವ್ಯವಸ್ಥೆ ಮಾಡದೆ, ಮೂಳೆಗಳನ್ನು ಚೀಲದಲ್ಲಿ ನೀಡಿ ಅಮಾನವೀಯತೆ ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಾವಗೆ ಗ್ರಾಮದ ಹೊರ ವಲಯದಲ್ಲಿ ಇರುವ ಸ್ನೇಹಂ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.



Join Whatsapp