ಬೆಳಗಾವಿ: ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದು ಕಿಡಿಗೇಡಿಗಳು ಪರಾರಿ

Prasthutha|

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -


ಕಿಡಿಗೇಡಿಗಳ ಕೃತ್ಯಕ್ಕೆ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ.


ವಿಷಯ ತಿಳಿದು ರಾಯಣ್ಣ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp