ಬೆಳಗಾವಿ ಉಪ ಚುನಾವಣೆ । ಪ್ರಚೋದನಕಾರಿ ಭಾಷಣಗಳ ಕುಖ್ಯಾತಿಯ ಮುತಾಲಿಕ್ ಗೆ ಟಿಕೆಟ್ ?

Prasthutha|

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ದಿನಾಂಕ ಮಂಗಳವಾರ ಘೊಷಣೆಯಾಗಿದ್ದು ಮಾರ್ಚ್ 23 ರಂದು ಚುನಾವಣೆ ನಡೆಯಲಿದೆ. ಬೆಳಗಾವಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತಯಾರಿಯನ್ನು ನಡೆಸುತ್ತಿದ್ದು ಬಿಜೆಪಿಯ ಅಭ್ಯರ್ಥಿಯಾಗಿ ಪ್ರಚೋದನಕಾರಿ ಭಾಷಣಗಳಿಗಾಗಿ ಕುಖ್ಯಾತಿ ಪಡೆದಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣ್ಣಹಾಕಿದ್ದು, ಹಲವೆಡೆ ಬಹಿರಂಗವಾಗಿ ತನ್ನ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

- Advertisement -


ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿಯಲ್ಲಿ ಉಪಚುನಾವಣೆ ಎದುರಿಸಬೇಕಾಗಿ ಬಂದಿದೆ. ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದು ಉಪ ಚುನಾವಣೆಗೆ ಮಾರ್ಚ್ 23ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.


ಇದೀಗ ಬಿಜೆಪಿ ಮುತಾಲಿಕ್ ಅವರ ಬಯಕೆ ಈಡೇರಿಸಲಿದೆಯೇ ಅಥವಾ ಅಂಗಡಿಯವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಿದೆಯೇ ಎಂಬುವುವುದಿನ್ನೂ ನಿಗೂಢವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಾ. ಸಾದಣ್ಣನವರ್ ಅಭ್ಯರ್ಥಿಯಾಗಿದ್ದು ಸೋಲು ಕಂಡಿದ್ದರು. ಈಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಾಳಯದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

Join Whatsapp