ಬಳ್ಳಾರಿ: ಇಸ್ಲಾಂ, ಪ್ರವಾದಿ ಬಗ್ಗೆ ಅವಹೇಳನಕಾರಿ ಬರಹ| ಪ್ರೊಫೆಸರ್ ವಿರುದ್ಧ ಹೊಸಪೇಟೆ ಟೌನ್ ಠಾಣೆಗೆ ದೂರು ನೀಡಿದ ಕ್ಯಾಂಪಸ್ ಫ್ರಂಟ್

Prasthutha|

ಬಳ್ಳಾರಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಮರು ಮತ್ತು ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಕಾರಿ ಅಂಶಗಳನ್ನು ತುರುಕಲಾಗಿದೆ ಎಂದು ಆರೋಪಿಸಿ ಈ ಕೃತಿಯ ಲೇಖಕರಾದ ಬಿ.ಆರ್. ರಾಮಚಂದ್ರಯ್ಯರವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಳ್ಳಾರಿ ಜಿಲ್ಲಾ ಸಮಿತಿಯು ಹೊಸಪೇಟೆ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದೆ.

- Advertisement -

  ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್ ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ನಿಂದಿಸಲಾಗಿದೆ. ಈ ಕೃತಿಯನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳು ಕೂಡ ಬಿಎಡ್ ಮೂರನೇ ಸೆಮಿಸ್ಟರ್ ಪಠ್ಯಪುಸ್ತಕವಾಗಿ ಆಯ್ಕೆಮಾಡಿಕೊಂಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

  ಉದ್ದೇಶಪೂರ್ವಕರಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಹಾಗೂ ಪ್ರಕಾಶಕರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಳ್ಳಾರಿ ಜಿಲ್ಲಾ ನಿಯೋಗವು ಹೊಸಪೇಟೆ ಟೌನ್ ಠಾಣೆಯ ವೃತ್ತ ನಿರೀಕ್ಷಕರಿಗೆ ದೂರು ನೀಡಿದೆ.

- Advertisement -

 ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ಸಮಿತಿ ಸದಸ್ಯರಾದ ಶಕ್ಷವಲಿ, ಫರ್ದೀನ್ ಮತ್ತು ಫಯಾಜ್ ಉಪಸ್ಥಿತರಿದ್ದರು.

Join Whatsapp