ಬೆಳ್ಳಾರೆ: SDPI ವತಿಯಿಂದ ಕನ್ನಡ ರಾಜ್ಯೋತ್ಸವ

Prasthutha|

ಬೆಳ್ಳಾರೆ:   ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

- Advertisement -

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಸಮಿತಿ ಕೋಶಾಧಿಕಾರಿ ಹಾಜಿ.ಕೆ.ಮಮ್ಮಾಲಿ, ಕನ್ನಡ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.

ಸಂದೇಶ ಬಾಷಣ ಮಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ನಾಯಕ ಜನಾಬ್ ಶಾಫಿ ಬೆಳ್ಳಾರೆ ಕನ್ನಡ ಭಾಷೆ , ಕರ್ನಾಟಕದ ಸಂಸ್ಕೃತಿ, ಪರಂಪರೆಯನ್ನು ಗೌರವಿಸುತ್ತಾ ಅದರ ಉಳಿವಿಗಾಗಿ ಪ್ರಯತ್ನ ಪಡಬೇಕು ಹಾಗೂ ಹಿಂದಿ ಹೇರಿಕೆಯ ಮುಖಾಂತರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು, ಅದರ ಪರಂಪರೆಗೆ ದಕ್ಕೆ ತರುವ ಪ್ರಯತ್ನವನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ವಿರೋಧಿಸುವ ಮೂಲಕ ಮತ್ತೆ   ಹೋರಾಟಗಳನ್ನು ಮಾಡುವ ಅನಿವಾರ್ಯತೆ ಇದೆ ಎಂದರು.

- Advertisement -

 ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ, ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಶಾಹೀದ್.ಎಂ, ಗ್ರಾಮ ಸಮಿತಿ ಕಾರ್ಯದರ್ಶಿ ಜಾಬಿರ್, ಗ್ರಾಮ ಹಾಗೂ ಬೂತ್ ಸಮಿತಿ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಗ್ರಾಮ ಸಮಿತಿ ಉಪಾಧ್ಯಕ್ಷ ಶಫೀಕ್ ಸ್ವಾಗತಿಸಿ ವಂದಿಸಿದರು.

Join Whatsapp