ಬೆಳ್ತಂಗಡಿ ಶಾಸಕನ ಕೊಲೆಯತ್ನ ನಡೆದಿಲ್ಲ : ಕೊಲೆ ಬೆದರಿಕೆ ಸುಳ್ಳು ಸುದ್ದಿ: ದ‌.ಕ.ಎಸ್ಪಿ

Prasthutha|

ಮಂಗಳೂರು: ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಮೇಲೆ ದಾಳಿ ಪ್ರಕರಣವು ಕೊಲೆ ಯತ್ನವಲ್ಲ. ಕೊಲೆ ಬೆ‍ದರಿಕೆ ಎಂಬುದು ಸುಳ್ಳು ಸುದ್ದಿ. ಇದು ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.

- Advertisement -

ದಾಳಿ ಯತ್ನದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ ಎಂದು ಹೇಳಿದರೆ. ಆತನ ವಿರುದ್ಧ ಈ ಹಿಂದೆಯೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ‌ ಎಂದು ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಆರೋಪಿ ನಿನ್ನೆ ರಾತ್ರಿ 11 ಗಂಟೆಯ ವೇಳೆಗೆ ತನ್ನ ಕಾರಿನ ಮೇಲೆ ದಾಳಿ ನಡೆಸಿ ತಲವಾರು ಝಳಪಿಸಿದ್ದ ಎನ್ನಲಾಗಿತ್ತು. ಈ ಬಗ್ಗೆ ಹರೀಶ್ ಪೂಂಜಾ ಕಾರು ಚಾಲಕ ನವೀನ್ ನೀಡಿದ್ದ ದೂರಿನ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

Join Whatsapp