ಬೆಳ್ತಂಗಡಿಯ ಮೂವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು, 6 ಮಂದಿಯ ಬಂಧನ

Prasthutha|

ತುಮಕೂರು: ತಾಲೂಕಿನ ಕೋರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಕಾರಿನಲ್ಲಿ ಬೆಳ್ತಂಗಡಿಯ ಮೂವರ ಶವ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಭೇದಿಸುವಲ್ಲಿ ತುಮಕೂರು ಪೊಲೀ ಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ. ಆಶೋಕ್‌ ತಿಳಿಸಿದ್ದಾರೆ.

- Advertisement -

ತುಮಕೂರು ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆ.ವಿ. ಅಶೋಕ್, ಪುಟ್ಟಸ್ವಾಮಯ್ಯ ಪಾಳ್ಯದ ಮಧು (24), ಸಂತೆಪೇಟೆಯ ನವೀನ್‌ (24), ವೆಂಕಟೇಶಪುರದ ಕೃಷ್ಣ (22), ಹೊಂಬಯ್ಯನಪಾಳ್ಯದ ಗಣೇಶ ( 19), ನಾಗಣ್ಣ ಪಾಳ್ಯದ ಕಿರಣ್‌ (23) ಹಾಗೂ ಕಾಳಿದಾಸನಗರದ ಸೈಮನ್‌ (18) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಹೇಳಿದ್ದಾರೆ.

ನಿಧಿಯಲ್ಲಿ ಸಿಕ್ಕ ಚಿನ್ನವನ್ನು ಕೊಳ್ಳುವ ಆಮಿಷವನ್ನು ನಂಬಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಹೋಗಿದ್ದ ಮೂವರಿಗೆ ಮೋಸ ಮಾಡಿ ಅವರನ್ನು ಕೊಂದು ಚಿನ್ನ ಕೊಳ್ಳಲು ತಂದಿದ್ದ ಹಣವನ್ನು ದೋಚಿರುವ ಘಟನೆ ಇದಾಗಿದೆ SP ತಿಳಿಸಿದ್ದಾರೆ.

- Advertisement -

ಆರೋಪಿಗಳು 3 ಕೆ.ಜಿ. ಚಿನ್ನ ಕೊಡುವ ಆಮಿಷವೊಡ್ಡಿ ಸಂಚು ರೂಪಿಸಿ ಬೀರನಕಲ್ಲು ಬೆಟ್ಟದ ಸಮೀಪ ಕರೆದೊಯ್ದು ಮಚ್ಚು, ಡ್ರಾÂಗನ್‌, ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಅನಂತರ ಅವರದ್ದೇ ಕಾರಿನಲ್ಲಿ ಕುಚ್ಚಂಗಿ ಕೆರೆಗೆ ತೆಗೆದುಕೊಂಡು ಬಂದು ಸಾಕ್ಷÂ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.

ಮೃತರು ಪಾತರಾಜು ಜತೆ ಸೇರಿ ಕಳೆದ 6-7 ತಿಂಗಳಿನಿಂದ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದು, ನಿಧಿಗಾಗಿ ಪಾತರಾಜನಿಗೆ ಸುಮಾರು 6 ಲಕ್ಷ ರೂ. ಹಣ ನೀಡಿದ್ದರು. ಹಣ ನೀಡಿ 6 ತಿಂಗಳು ಕಳೆದರೂ ನಿಧಿ ಹುಡುಕಿ ಕೊಡದಿದ್ದ ಕಾರಣ ಹಣ ವಾಪಸು ಕೇಳಿದ್ದಾರೆ. ಹಣ ಕೊಡದಿದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರು. ಅವರನ್ನು ಹೇಗಾದರು ಮಾಡಿ ಕೊಲೆ ಮಾಡಬೇಕೆಂದು ನಿರ್ಧರಿಸಿದ ಪಾತರಾಜು ನಿಧಿ ಸಿಕ್ಕಿದೆ ಎಂದು ನಂಬಿಸಿ ಹಣದೊಂದಿಗೆ ಬರಲು ಹೇಳಿ, ತನಗೆ ಪರಿಚಯವಿದ್ದ ಸತ್ಯಮಂಗಲದ ಗಂಗರಾಜು ಮತ್ತು ಆತನ ಸಹಚರರ ಜತೆಗೆ ಸೇರಿ ಕೊಲೆ ಮಾಡಿದ್ದಾನೆ ಎಂದು SP ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಸಾಕ್ ಸೀಮಮ್‌ (54), ಶಾಹುಲ್‌ ಹಮೀದ್‌ (45), ಸಿದ್ದೀಕ್ (34) ಮೃತ ದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ತುಮಕೂರಿನಲ್ಲಿ ಪತ್ತೆಯಾಗಿದ್ದು, ಭಯಾನಕ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮೃತ ವ್ಯಕ್ತಿಗಳು

Join Whatsapp