ಬೆಳ್ತಂಗಡಿ: ದುಷ್ಕರ್ಮಿಗಳಿಂದ ಮಸೀದಿಗೆ ಬಿಯರ್ ಬಾಟಲಿ ಎಸೆದು ಕೋಮುಗಲಭೆಗೆ ಸಂಚು

Prasthutha|

ಮಂಗಳೂರು: ಬೆಳ್ತಂಗಡಿ ಸಮೀಪದ ಮುರ ಎಂಬಲ್ಲಿನ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿ ಕೋಮುಗಲಭೆಗೆ ಸಂಚು ರೂಪಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

- Advertisement -

ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆಯಿಂದ ಮಸೀದಿ ಮತ್ತು ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಭಾಗಶಃ ಹಾನಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

- Advertisement -

ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

Join Whatsapp