ಬೆಳ್ತಂಗಡಿ: ರಸ್ತೆಬದಿ ನಿಲ್ಲಿಸಿದ್ದ ವಾಹನಕ್ಕೆ KSRTC ಬಸ್ ಡಿಕ್ಕಿ| ಓರ್ವ ಸಾವು; 7ಮಂದಿ ಗಂಭೀರ

Prasthutha|

ಬೆಳ್ತಂಗಡಿ: ರಸ್ತೆಬದಿ ನಿಲ್ಲಿಸಿದ್ದ ವಾಹನಕ್ಕೆ KSRTC ಬಸ್ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 7ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನಡೆದಿದೆ.

- Advertisement -

ಈ ದಾರುಣ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ 63 ವರ್ಷದ ಮಹದೇವ ಎಂದು ಗುರುತಿಸಲಾಗಿದೆ.  ಐವರು ಮಹಿಳೆಯರು, ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು,ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯ ಜಿಲ್ಲೆಯಿಂದ ಧರ್ಮಸ್ಥಳದಲ್ಲಿ ನಡೆಯುತ್ತಿರುವ ದೀಪೋತ್ಸವಕ್ಕೆ ಆಗಮಿಸಿದ್ದಒಂದೇ ಕುಟುಂಬದ ಹತ್ತು ಮಂದಿ ಕುದ್ರಾಯ ಎಂಬಲ್ಲಿ ಬೊಲೋರೋ ವಾಹನವನ್ನು ರಸ್ತೆಯ ಬಲಕ್ಕೆ ನಿಲ್ಲಿಸಿ ಅಂಗಡಿಗೆ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ ಢಿಕ್ಕಿ ಹೊಡೆದಿದೆ.

- Advertisement -

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp