ಬೆಳ್ತಂಗಡಿ | ಪಶುವೈದ್ಯನಿಂದ ಹಲ್ಲೆ; ವ್ಯಕ್ತಿ ಸ್ಥಳದಲ್ಲೇ ಮೃತ್ಯು

Prasthutha|

ಬೆಳ್ತಂಗಡಿ: ಪಶುವೈದ್ಯನೋರ್ವ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್‌ ನಲ್ಲಿ ಸೋಮವಾರ ನಡೆದಿದೆ.

- Advertisement -

ಪಟ್ರಮೆ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಮೃತರು.

ಕೃಷ್ಣ ಅವರು ವಿಪರೀತ ಜ್ವರದಿಂದ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೊಕ್ಕಡಕ್ಕೆ ಬಂದಿದ್ದಾರೆ. ಈ ಸಂದರ್ಭ ತನ್ನ ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯ ಡಾ| ಕುಮಾರ್‌ ಅವರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಆಸ್ಪತ್ರೆಯಿಂದ ಯಾಕೆ ಬಂದೆ. ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ.

- Advertisement -

ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ‌.



Join Whatsapp