ಬೆಳ್ತಂಗಡಿ : ಎಂ. ಕಾಂ ಕಲಿಯುತ್ತಿದ್ದ ಯುವ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿಯಾಗಿರುವ ಎಂ. ಕಾಂ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತಳನ್ನು 22 ವರ್ಷ ವಯಸ್ಸಿನ ದೀಕ್ಷಿತಾ ಎಂದು ಗುರುತಿಸಲಾಗಿದೆ. ದೀಕ್ಷಿತಾ ಅವರು ಎಂ. ಕಾಂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

- Advertisement -

ದೀಕ್ಷಿತಾ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಕುರಿತು ವರದಿಗಳಿವೆ. ಅವರು ಮೇಲಂತಬೆಟ್ಟು ಕಾಲೇಜಿನಲ್ಲಿ ಕಲಿಯುತ್ತಿದ್ದರೆನ್ನಲಾಗಿದೆ. ಆತ್ಮಹತ್ಯೆಗೈಯ್ಯುವ ಮುನ್ನ ಇಂಗ್ಲಿಷ್ ನಲ್ಲಿ ಬರೆದಿದ್ದಾರೆನ್ನಲಾದ ಡೆತ್ ನೋಟ್ ಪತ್ತೆಯಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Join Whatsapp