ಬೆಳ್ತಂಗಡಿ | ಬಾಕಿ ಹಣ ಕೇಳಿದ್ದಕ್ಕೆ ಅಂಗಡಿಯ ಬ್ಯಾನರ್’ಗೆ ಬೆಂಕಿ: ಆರೋಪಿಯ ಬಂಧನ

- Advertisement -

ಬೆಳ್ತಂಗಡಿ: ಅಂಗಡಿಯಲ್ಲಿ ಸಾಮಗ್ರಗಳನ್ನು ಖರೀದಿಸಿ ಬಾಕಿಯಿರಿಸಿದ್ದ ಹಣವನ್ನು ಕೇಳಿದ್ದಕ್ಕೆ ಯುವಕನೋರ್ವ ಅಂಗಡಿಗಯ ಫ್ಲೆಕ್ಸ್ ಗೆ ಬೆಂಕಿ ಹಚ್ಚಿದ ಘಟನೆ ಗುರುವಾಯನಕೆರೆಯಲ್ಲಿ ನಿನ್ನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಬಳಂಜ ಗ್ರಾಮ ಕಟ್ಟೆ ನಿವಾಸಿ ಉಮೇಶ್ ಬಂಗೇರ(29) ಎಂದು ಗುರುತಿಸಲಾಗಿದೆ.

ಗುರುವಾಯನಕೆರೆಯಲ್ಲಿ ಸದಕತುಲ್ಲಾ ಎಂಬವರಿಗೆ ಸೇರಿದ ಜಿ.ಕೆ.ಸ್ಟೋರ್ ಹೆಸರಿನ ಅಂಗಡಿ ಬದಿಯಲ್ಲಿ ಇರಿಸಲಾಗಿದ್ದ ಜಾಹೀರಾತು ಫ್ಲೆಕ್ಸ್ ಗೆ ಜುಲೈ 10ರಂದು ಬೆಳಗ್ಗಿನ ಜಾವ ಬೆಂಕಿ ಹಚ್ಚಲಾಗಿತ್ತು. ಮಾಲಕ ಬೆಳಗ್ಗೆ ಅಂಗಡಿಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಗುರುವಾರ ಮುಂಜಾನೆ 5 ಗಂಟೆ ವೇಳೆ ಆರೋಪಿ ಉಮೇಶ್ ಬಂಗೇರ ಬೆಂಕಿ ಹಚ್ಚಿ ಓಡಿ ಹೋಗುತ್ತಿರುವುದು ಸೆರೆಯಾಗಿತ್ತು. ಇದರಿಂದ ಸುಮಾರು 3 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂಗಡಿ ಮಾಲಕ ಸದಕತುಲ್ಲಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಉಮೇಶ್ ಬಂಗೇರನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -


Must Read

Related Articles