ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

Prasthutha|

ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಉಜಿರೆ ಕಾಲೇಜು ರಸ್ತೆಯ ಬಳಿ ನಡೆದಿದೆ.

- Advertisement -


ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ, ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ದಿಕ್ಷೀತ್ (20) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.


ಈತ ಗುರುವಾರ ಮಧ್ಯಾಹ್ನ ಊಟ ಮಾಡಿ ಕಾಲೇಜಿಗೆ ಮರಳುತ್ತಿರುವಾಗ ಬೈಕ್ ನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದೆ.

- Advertisement -


ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Join Whatsapp