Home ಕರಾವಳಿ ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿಯ ಯುವಕ ಬಲಿ

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿಯ ಯುವಕ ಬಲಿ

ದಕ್ಷಿಣ ಕನ್ನಡ : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೀಜದಡಿ ಮನೆಯ ಟೊಕ್ಕಯ್ಯ ಗೌಡರ ಮಗ ಅವಿವಾಹಿತ ಪ್ರಸಾದ್ ಗೌಡ (30) ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದು ಮೂರು ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡಾಗ ಉಜಿರೆ ಬೆನಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಮಂಗಳೂರು KMC ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ದಾಖಲಿಸಿದ್ದು ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸಾವಿನ ಸಂಖ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲೂ ಹೆಚ್ಚುತ್ತಿದ್ದು, ಈ ನಡುವೆ ಡೆಂಗ್ಯೂ ಜ್ವರದಿಂದ ಯುವಕ ಸಾವನ್ನಪ್ಪಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

Join Whatsapp
Exit mobile version