ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದಿದ್ದ ಮಹಿಳೆ ಜೈಲಿನಲ್ಲಿ ಆತ್ಮಹತ್ಯೆ

Prasthutha|

ಬೆಂಗಳೂರು: 9 ಮತ್ತು 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ಜೈಲು ಸೇರಿದ್ದ ಮಹಿಳೆ ಗಂಗಾದೇವಿ ಜೈಲಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಘಟನೆ ನಡೆದಿದೆ.

- Advertisement -

ಮಂಗಳವಾರ ರಾತ್ರಿ ಗಂಗಾದೇವಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಮಕ್ಕಳು ತನ್ನಂತೆ ಜೀವನದಲ್ಲಿ ಕಷ್ಟ ಪಡಬಾರದು ಎನ್ನುವ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಮಕ್ಕಳಾದ 9 ವರ್ಷದ ಗೌತಮ್ ಮತ್ತು 7 ವರ್ಷದ ಲಕ್ಷ್ಮಿಯನ್ನು ಕೊಲೆ ಮಾಡಿದ್ದ ಗಂಗಾದೇವಿ ಅವರನ್ನು ಪೊಲೀಸರು ಬಂಧಿಸಿದ್ದರು.

- Advertisement -

ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದ ಗಂಗಾದೇವಿ ತಾಯಿ, ಮಕ್ಕಳೊಂದಿಗೆ ವಾಸವಾಗಿದ್ದರು. ತಾಯಿ ಊರಿಗೆ ಹೋಗಿದ್ದರಿಂದ ಮಕ್ಕಳೊಂದಿಗೆ ಮನೆಯಲ್ಲಿದ್ದ ಗಂಗಾದೇವಿ ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.

Join Whatsapp