ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ್ಯು: ಎಇಇ ಅಮಾನತು

Prasthutha|

ಬೆಂಗಳೂರು: ಬಾಬುಸಾಬ್‌ ಪಾಳ್ಯದಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್‌ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್‌ ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಿಗದಿ ಅವಧಿಯಲ್ಲಿ ನೋಟಿಸ್‌ ನೀಡಿದ್ದರೂ, ಅಕ್ರಮ ಕಟ್ಟಡ ಎಂದು ತಿಳಿದರೂ ತೆರವು ಮಾಡುವಲ್ಲಿ ಎಇಇ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರ ವರದಿ ಮೇರೆಗೆ ಅಮಾನತು ಮಾಡಿ ಆದೇಶಿಸಲಾಗಿದೆ.



Join Whatsapp