ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಮಾರ್ಚ್ 14ಕ್ಕೆ ಮುಂದೂಡಿಕೆ

Prasthutha|

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಟೋಲ್ ಸಂಗ್ರಹವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮಾರ್ಚ್ 14ಕ್ಕೆ ಮುಂದೂಡಿದೆ.

- Advertisement -

ಮಂಗಳವಾರದಿಂದ (ಫೆ.28) ಕಣಮಿಣಕೆ ಹಾಗೂ
ಶೇಷಗಿರಿಹಳ್ಳಿ ಟೋಲ್‌ಗಳಲ್ಲಿ ವಾಹನ ಸವಾರರಿಂದ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು.
ಆದರೆ, ಉದ್ಘಾಟನೆಗೂ ಮುನ್ನವೇ ಟೋಲ್ ಆರಂಭಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದೆ.

ಟೋಲ್ ಶುಲ್ಕ ದುಬಾರಿ ಎಂಬ ದೂರುಗಳ ಹಿನ್ನೆಲೆಯಲ್ಲಿ ಪ್ರಾಧಿಕಾರವು ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಪ್ರತಿಭಟನೆ ಎಚ್ಚರಿಕೆ ಹಿನ್ನೆಲೆಯಲ್ಲಿ ಎರಡು ಟೋಲ್ ಕೇಂದ್ರಗಳಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.

Join Whatsapp