ಪೊಲೀಸ್ ಠಾಣೆ, ಪೊಲೀಸರ ಬಗ್ಗೆ ಫೀಡ್​ಬ್ಯಾಕ್ ಕೊಡಲು ಕ್ಯುಆರ್​​ ಕೋಡ್: ಬೆಂಗಳೂರು ಪೊಲೀಸರಿಂದ ‘ಲೋಕಸ್ಪಂದನ’

Prasthutha|

ಬೆಂಗಳೂರು: ಪೊಲೀಸ್ ಠಾಣೆ ಮತ್ತು ಪೊಲೀಸರ ಬಗ್ಗೆ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳಲು ನಾಗರಿಕರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ಪೊಲೀಸರು ‘ಲೋಕಸ್ಪಂದನ’ ಎಂಬ ಕ್ಯುಆರ್​​ ಕೋಡ್ ಸೇವೆಯನ್ನು ಆರಂಭಿಸಿದ್ದಾರೆ.

- Advertisement -

 ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕ್ಯುಆರ್​​ ಕೋಡ್ ಅನ್ನು ಪ್ರದರ್ಶಿಸಲಾಗುತ್ತಿದ್ದು, ಅದರ ಮೂಲಕ ಜನರು ತಮ್ಮ ಪ್ರತಿಕ್ರಿಯೆಯನ್ನು ನೀಡಬಹುದಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಈ ವಿಚಾರವಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು. ಜನರಿಗೆ ಉತ್ತಮ ಸೇವೆ ಒದಗಿಸಲು ಇದು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಡಿಸಿಪಿಗಳ ನೇತೃತ್ವದಲ್ಲಿ ಎಲ್ಲಾ ವಿಭಾಗಗಳಲ್ಲಿ ಮತ್ತು ಕಮಿಷನರೇಟ್‌ನಲ್ಲಿರುವ ಕಮಾಂಡ್ ಸೆಂಟರ್‌ನಲ್ಲಿ ಪ್ರತಿಕ್ರಿಯೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಪೊಲೀಸ್ ಠಾಣೆಗಳಿಗೆ ಹೋಗುವ ಜನರಿಗೆ ಏನಾಗುತ್ತದೆ ಎಂಬುದನ್ನು ನಾವು ಈ ಮೂಲಕ ಅರ್ಥಮಾಡಿಕೊಳ್ಳಬಹುದು. ಸೇವೆಯಲ್ಲಿ ಯಾವುದೇ ವಿಳಂಬವಾಗಿದೆಯೇ ಮತ್ತು ಅವರು ಸಂಬಂಧಪಟ್ಟ ಅಧಿಕಾರಿಗಳ ಕೆಲಸದಿಂದ ತೃಪ್ತರಾಗಿದ್ದಾರೆಯೇ ಎಂಬುದನ್ನು ನಾವು ಟ್ರ್ಯಾಕ್ ಮಾಡಬಹುದು. ಇದರಿಂದ ಠಾಣೆ ಮಟ್ಟದಲ್ಲಿನ ಕಾರ್ಯವೈಖರಿಯನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

- Advertisement -

ಸಾರ್ವಜನಿಕರ ಪ್ರತಿಕ್ರಿಯೆಗಳು ಬಂದರೆ ಅದನ್ನು ಕೌನ್ಸೆಲಿಂಗ್ ಅಥವಾ ಶಿಸ್ತು ಕ್ರಮದ ರೂಪದಲ್ಲಿ ಪರಿಹರಿಸಲಾಗುವುದು ಎಂದ ಅವರು, ಜನರ ಪ್ರತಿಕ್ರಿಯೆಯ ಆಧಾರದ ಮೇಲೆ, ಯಾವ ಪೊಲೀಸ್ ಠಾಣೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾವುದು ಕೆಟ್ಟದಾಗಿದೆ ಎಂದು ನಮಗೆ ತಿಳಿಯುತ್ತದೆ. ಯಾವುದೇ ವರ್ತನೆಯ ಸಮಸ್ಯೆಗಳು ಅಥವಾ ಇತರ ಕೆಲವು ಸಮಸ್ಯೆಗಳನ್ನು ಪರಿಸ್ಥಿತಿಗೆ ಅನುಗುಣವಾಗಿ ಸರಿಪಡಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಆಯುಕ್ತರು ಹೇಳಿದ್ದಾರೆ.

Join Whatsapp