ಬೆಂಗಳೂರು: ಎಸ್‌ಡಿಪಿಐ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ

Prasthutha|

ಬೆಂಗಳೂರು: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯಕಾರಣಿ ಸಭೆ ಏಪ್ರಿಲ್ 30ರಂದು ಬೆಂಗಳೂರಿನ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಹಾಸನದಲ್ಲಿ ನಡೆದ ದೇಶದ ಅತೀ ದೊಡ್ಡ ಸೆಕ್ಸ್ ಸ್ಕ್ಯಾಮ್ ಆರೋಪಿ ಹಾಸನದ NDA ಅಭ್ಯರ್ಥಿ ಪ್ರಜ್ವಲ್‌ನನ್ನು ಬಂಧಿಸಲು ಒತ್ತಾಯಿಸಿ ಮತ್ತು BJPಯ ಪಕ್ಷಪಾತ ಧೋರಣೆ ಖಂಡಿಸಿ ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಯಿತು.

- Advertisement -

ಮುಂಬರುವ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಫ್ಯಾಶಿಸ್ಟ್ ಶಕ್ತಿಗಳನ್ನು ಸೋಲಿಸಲು ಎಸ್‌ಡಿಪಿಐ ಕಾರ್ಯಕರ್ತರು ಶ್ರಮವಹಿಸಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು. SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಫ್ಸರ್ ಕೊಡ್ಲಿಪೇಟೆ, ಬಿ.ಆರ್ ಭಾಸ್ಕರ್ ಪ್ರಸಾದ್, ಅಬ್ದುಲ್ ಲತೀಫ್, ಮಜೀದ್ ತುಂಬೆ ಮತ್ತು ರಾಜ್ಯ ನಾಯಕರು ಉಪಸ್ಥಿತರಿದ್ದರು.

Join Whatsapp