ಬೆಂಗಳೂರು: ಆರ್ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್ ಸಿಎ, ಆರ್ ಸಿಬಿ, ಡಿಎನ್ ಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬ ಹೈಕೋರ್ಟ್ ಆದೇಶ ವಿಸ್ತರಣೆಯಾಗಿದೆ.
ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದು ಕೋರಿ ಆರ್ ಸಿಬಿ, ಕೆಎಸ್ ಸಿಎ, ಡಿಎನ್ ಎ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 5ರ ವರೆಗೆ ಆರೋಪಪಟ್ಟಿ ಸಲ್ಲಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶ ವಿಸ್ತರಣೆಯಾಗಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಲಾಗಿದೆ. ಇದರೊಂದಿಗೆ ಪದಾಧಿಕಾರಿಗಳಿಗೆ ಮಧ್ಯಂತರ ರಕ್ಷಣೆ ಸಿಕ್ಕಂತಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ(ಕೆಎಸ್ಸಿಎ), ರಾಯಲ್ ಚಾಲಂಜರ್ಸ್ ಬೆಂಗಳೂರು ಫ್ರಾಂಚೈಸಿ ಹಾಗೂ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಲ್ಲದೇ ಕೆಲವರು ಬಂಧಿಸಲಾಗಿತ್ತು.
ಈ ಪ್ರಕರಣ ರದ್ದುಕೋರಿ ಕೆಎಸ್ಸಿಎ, ಆರ್ ಸಿಬಿ ಹಾಗೂ ಡಿಎನ್ ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರನೆ ನಡೆಸಿದ್ದ ಹೈಕೋರ್ಟ್, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಆದೇಶ ಹೊರಡಿಸಿತ್ತು. ಇದೀಗ ಆಗಸ್ಟ್ 5ರ ವರೆಗೆ ಚಾರ್ಜ್ ಶೀಟ್ ಸಲ್ಲಿಸದಂತೆ ಕೋರ್ಟ್ ಮಹತ್ವ ಸೂಚನೆ ನೀಡಿದೆ. ಹಾಗೇ ಬಲವಂತದ ಕ್ರಮ ಬೇಡ ಎನ್ನುವ ಹೈಕೋರ್ಟ್ ನ ಆದೇಶ ವಿಸ್ತರಣೆಯಾಗಿದೆ.
