ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Prasthutha|

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.

- Advertisement -

ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತರು. ಜೆಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp