ಬೆಂಗಳೂರಿನ ಯುವಕ ಉಳ್ಳಾಲದ ಬಳಿಯ ಬಾವಿಯಲ್ಲಿ ಶವವಾಗಿ ಪತ್ತೆ

Prasthutha|

ಮಂಗಳೂರು: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್‌ ಎ.ಎಸ್‌. (36) ಮೃತ ಯುವಕ. ಕಳೆದ ನ. 30ರಂದು ತೊಕ್ಕೊಟ್ಟಿಗೆ ಬಂದಿದ್ದ ಆತ ಉಳ್ಳಾಲ ಲಾಡ್ಜ್ ನಲ್ಲಿ ತಂಗಿದ್ದು, ಅಲ್ಲಿಂದ ಹೊರಗೆ ತೆರಳಿದವರು ವಾಪಸಾಗಿರಲಿಲ್ಲ. ಡಿ. 1ರಂದು ಸಂಜೆ ರೂಂಗೆ ಬಂದು ತಪಾಸಣೆ ನಡೆಸಿದಾಗ ಮಹಾಂತೇಶ್‌ ಇರಲಿಲ್ಲ. ಈ ಸಂಬಂಧ  ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಡಿ. 2ರಂದು  ಮಹಾಂತೇಶ್‌ ಸಹೋದರಿ ಉಳ್ಳಾಲ ಠಾಣೆಯಲ್ಲಿ ಸಹೋದರ ನಾಪತ್ತೆ ಕುರಿತು ದೂರು ದಾಖಲಿಸಿದ್ದರು.

ಅಬ್ದುಲ್‌ ಸಮದ್‌ ಅವರ ಮನೆಯ ಹಿಂದಿನ ಬಾವಿಯಲ್ಲಿ ಮಹಂತೇಶ್‌ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮದ್‌ ಮನೆ ಕೆಲಸದಾಕೆ ಸುಗಂಧಿ ಎಂಬವರು ಬಾವಿಯೊಳಗೆ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ನೋಡಿದಾಗ ಅಪರಿಚಿತ ವ್ಯಕ್ತಿಯ ಶವ ಕಂಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಮತ್ತು ಉಳ್ಳಾಲ ಪೊಲೀಸರು ಕೊಳೆತ ಶವವನ್ನು ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Join Whatsapp