Home ಟಾಪ್ ಸುದ್ದಿಗಳು ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಸುಮಾರು ಒಂಬತ್ತು ತಿಂಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೊಲೆಯಾದ ಯುವಕ ಶರತ್ ಶವವನ್ನು ಇನೋವಾ ಕಾರಿನಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ ನೇತೃತ್ವದಲ್ಲಿ ಶವ ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಲಾಗಿತ್ತು.

ಮೂರು ದಿನಗಳ ಕಾರ್ಯಾಚರಣೆಯಲ್ಲಿ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಅಗಿದ್ದ ಪೊಲೀಸರು  ಇಬ್ಬರು ಪ್ರಮುಖ ಆರೋಪಿಗಳನ್ನು ಜ.9 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Join Whatsapp
Exit mobile version