ಭದ್ರಾವತಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ: ಅಸಲಿ ಕಾರಣ ಬಹಿರಂಗ

Prasthutha|

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ ಬಜರಂಗದಳ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು, ಅಂದರ್ ಬಾಹರ್ ಇಸ್ಪೀಟ್ ಆಟದ ಸಂದರ್ಭದಲ್ಲಿ ನಡೆದ ಗಲಾಟೆ ಇದಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

- Advertisement -


ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದರು. ಈ ವೇಳೆ ಮುಬಾರಕ್ ಎಂಬಾತ ವೀಡಿಯೋ ಮಾಡಿಕೊಂಡಿದ್ದರು. ವೀಡಿಯೋ ಮಾಡಿದ್ದರಿಂದ ಇಬ್ಬರ ನಡುವೆ ಕಿರಿಕ್ ಕೂಡ ನಡೆಯುತ್ತದೆ. ಬಳಿಕ ಸುನಿಲ್ ಮುಬಾರಕ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದರ ಪ್ರತೀಕಾರವಾಗಿ ಮುಬಾರಕ್ ಕೂಡ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.


ಆದರೆ ಸುನೀಲ್ ಪೊಲೀಸರ ಮುಂದೆ ತಪ್ಪಿಸಿಕೊಳ್ಳಲು ಸುಳ್ಳಿನ ಕತೆ ಕಟ್ಟಿದ್ದು, ಕೋಮು ಭಾವನೆ ಕೆರಳುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿದ್ದು, ಮತೀಯ ದ್ವೇಷದಿಂದ ಚಾಕು ಇರಿತವಾಗಿದೆ ಎಂದು ಹೇಳಿದೆ.

Join Whatsapp