ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

Prasthutha|

ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ ಎಂದು ತುಳು ಭಾಷೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿದ್ದ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

- Advertisement -

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದರು ಎಂದು ಕಾಂಗ್ರೆಸ್ ನವರು ಅಧಿವೇಶನ ಮೊಟಕುಗೊಳಿಸಿದ್ದಾರೆ. ಆದರೆ ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ಸಿದ್ದ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜವನ್ನು ಹಾರಿಸುತ್ತೇವೆ. ಭಗವಾಧ್ವಜ ಹಾರಿಸೋದನ್ನು ಯಾರಿಂದಲೂ ತಪ್ಪಿಸಲಾಗಲ್ಲ ಎಂದು ಹೇಳಿಕೆ ನೀಡಿದ್ದಾರೆ.

- Advertisement -



Join Whatsapp