ಬೆಳಗಾವಿಯಲ್ಲಿ ಮಸೀದಿ ಮೇಲೆ ಭಗವಾಧ್ವಜ: ಕತ್ತಲೆಯಲ್ಲಿ ಕಿಡಿಗೇಡಿಗಳ ಕುಕೃತ್ಯ

Prasthutha|

ಬೆಳಗಾವಿ: ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಕಿಡಿಗೇಡಿಗಳು ಕೋಮು ಸೌಹಾರ್ದತೆ ಕೆಡವಲು ಪ್ರಯತ್ನ ನಡೆಸುತ್ತಿದ್ದು ಇದೀಗ ಬೆಳಗಾವಿಯಲ್ಲಿನ ಮಸೀದಿಯೊಂದರ ಮೇಲೆ ರಾತ್ರೋ ರಾತ್ರಿ ಕೇಸರಿ ಧ್ವಜ ಕಟ್ಟಿದ್ದಾರೆ. ಮೂಡಲಗಿ ತಾಲೂಕಿನ ಅರಬಾವಿ ಗ್ರಾಮದ ಸತ್ತಿಗೇರಿ ಮಡ್ಡಿ ತೋಟದ ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಬಣ್ಣದ ಧ್ವಜ ಕಟ್ಟಿ, ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಕಿಡಿಗೇಡಿಗಳು ರಾತ್ರೋ ರಾತ್ರಿ ಈ ಕೃತ್ಯ ಎಸಗಿದ್ದು, ಮುಸ್ಲಿಮರು ಬೆಳಗ್ಗೆ ಪ್ರಾರ್ಥನೆಗೆ ಮಸೀದಿಗೆ ಆಗಮಿಸಿದಾಗ ಕೇಸರಿ ಧ್ವಜ‌ ಕಟ್ಟಿರುವುದು ಗಮನಕ್ಕೆ ಬಂದಿದೆ.‌

- Advertisement -

ತಕ್ಷಣ ಸ್ಥಳೀಯ ಮುಸ್ಲಿಂ ಮುಖಂಡರು ಸೇರಿ ಮಸೀದಿ ಮೇಲೆ ಕಟ್ಟಲಾಗಿದ್ದ ಧ್ವಜ ತೆರವುಗೊಳಿಸಿದ್ದು, ಗ್ರಾಮದಲ್ಲಿ ಶಾಂತಿ ನೆಲೆಸಿದೆ. ಪೊಲೀಸರು ಈ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಮಸೀದಿಗೆ ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.. ಅಲ್ಲದೇ ಸ್ಥಳೀಯ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದು ಸದ್ಯದ ಬೆಳವಣಿಗೆಗಳ ಮೇಲೆ ಅರಕ್ಷಕರು ನಿಗಾ ಇಟ್ಟಿದ್ದಾರೆ.

Join Whatsapp