ಇಬ್ಬರ ಬಲಿ ಪಡೆದು ಸ್ಥಳೀಯರ ನಿದ್ದೆಗೆಡಿಸಿದ್ದ ಒಂಟಿಸಲಗ ‘ಭೈರ’ ಕೊನೆಗೂ ಸೆರೆ

Prasthutha|

ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿ ಇಬ್ಬರ ಜೀವ ತೆಗೆದು ಸ್ಥಳೀಯರ ನಿದ್ದೆಗೆಡಿಸಿದ್ದ ಒಂಟಿಸಲಗ ಮೂಡಿಗೆರೆ ಭೈರನನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಯಶಸ್ವಿಯಾಗಿದ್ದಾರೆ. 

- Advertisement -

ಅಲ್ಲದೇ ಭೈರ ಇನ್ನೆರಡು ಕಾಡಾನೆಗಳು ಹಾವಳಿ ಹೆಚ್ಚಾಗತೊಡಗಿದ್ದರಿಂದ ಸ್ಥಳೀಯರು ಕಂಗೆಟ್ಟು ಸರ್ಕಾರ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದಿದ್ದರು.

ಭೈರನ  ಹಾವಳಿಯಿಂದ ತಿಂಗಳಿಗೊಂದು ಹೆಣ ಬಿದ್ದ ಪರಿಣಾಮ ತಾಳ್ಮೆಗೆಟ್ಟು ಕಂಗೆಟ್ಟಿದ್ದ ಜನ ಶಾಸಕ ಎಂ ಪಿ ಕುಮಾರಸ್ವಾಮಿ ಮೇಲೂ ಹಲ್ಲೆಗೆ ಮುಂದಾಗಿದ್ದರು. ಜನ ಯಾವಾಗ ಶಾಸಕರ ಮೇಲೆ ಹಲ್ಲೆಗೆ ಮುಂದಾದರೋ ಕೂಡಲೇ ಸರ್ಕಾರ ಮೂರು ಕಾಡಾನೆಗಳನ್ನು ಹಿಡಿಯಲು ಹಸಿರು ನಿಶಾನೆ ತೋರಿತ್ತು.

- Advertisement -

ಸರ್ಕಾರ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಳೆದ ಎಂಟತ್ತು ದಿನಗಳಿಂದ ಆರು ಸಾಕಾನೆಗಳ ಜೊತೆಗೆ ಮೂರು ಕಾಡಾನೆಗಳನ್ನು ಹಿಡಿಯಲು ಅಧಿಕಾರಿಗಳು, ಸ್ಥಳೀಯರು ಹಗಲಿರುಳು ಕಷ್ಟ ಪಟ್ಟಿದ್ದರು. ಎರಡು ಕಾಡಾನೆಗಳನ್ನು ಸೆರೆ ಹಿಡಿದು ಮಡಿಕೇರಿಯ ಆನೆ ದುಬಾರೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರಕ್ಕೆ ಬಿಟ್ಟಿದ್ದರು. ಆದರೆ ಪುಂಡ ಒಂಟಿ ಸಲಗ ಮೂಡಿಗೆರೆ ಭೈರ ಮಾತ್ರ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗುತ್ತಿತ್ತು.  ಇದೀಗ ಭೈರ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

Join Whatsapp