‘ಭಾರತ್ ಬಂದ್ ಯಶಸ್ವಿಯಾಗಿದೆ, ರೈತರು ಪೂರ್ಣ ಬೆಂಬಲ ನೀಡಿದ್ದಾರೆ’: ರಾಕೇಶ್ ಟಿಕಾಯತ್

Prasthutha|

ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಇಂದು(ಸೆಪ್ಟೆಂಬರ್ 27) ಕರೆ ಕೊಟ್ಟಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

- Advertisement -

ಬಂದ್ ಕರೆಗೆ ಇಡೀ ದೇಶಾದ್ಯಂತ ರೈತರು ಸಂಪೂರ್ಣ ಬೆಂಬಲ ನೀಡಿದ್ದು, ನಮ್ಮ ಭಾರತ್ ಬಂದ್ ಯಶಸ್ವಿಯಾಗಿದೆ. ಜನರಿಗೆ ತೊಂದರೆಯಾಗಬಾರದೆಂದು ನಾವು ರಸ್ತೆ ತಡೆ, ಸಾರಿಗೆ ಸಂಚಾರಕ್ಕೆ ತಡೆಯೊಡ್ಡಿಲ್ಲ ಎಂದು ಅವರು ತಿಳಿಸಿದ್ದಾರೆ.

ನಾವು ಸರ್ಕಾರದ ಜತೆ ಮಾತುಕತೆ ನಡೆಸಲು ಸಿದ್ದರಾಗಿದ್ದೇವೆ. ಆದರೆ ಈಗ ಮಾತುಕತೆಗೆ ಅವಕಾಶ ದೊರಕಿಲ್ಲ. ಅಲ್ಲದೇ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಕಬ್ಬಿನ ಬೆಲೆಯನ್ನು ಹೆಚ್ಚಳ ಮಾಡಲು ವಿಫಲವಾಗಿದೆ ಎಂದು ಟಿಕಾಯತ್ ಆರೋಪಿಸಿದರು.

- Advertisement -

ಕಳೆದ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಕಬ್ಬಿನ ಬೆಲೆಯನ್ನು 375ರಿಂದ 450ರೂ.ವರೆಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಈಗ ಕೇವಲ 25 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ ಎಂದು ಟಿಕಾಯತ್ ದೂರಿದ್ದಾರೆ.

Join Whatsapp