Home ಟಾಪ್ ಸುದ್ದಿಗಳು ಭದ್ರತೆ ಒದಗಿಸಲು ಸರ್ಕಾರ ವಿಫಲ: ಭಾರತ್ ಜೋಡೊ ಯಾತ್ರೆ ಕೆಲಕಾಲ ಸ್ಥಗಿತ

ಭದ್ರತೆ ಒದಗಿಸಲು ಸರ್ಕಾರ ವಿಫಲ: ಭಾರತ್ ಜೋಡೊ ಯಾತ್ರೆ ಕೆಲಕಾಲ ಸ್ಥಗಿತ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಭದ್ರತಾ ಲೋಪದಿಂದಾಗಿ ಕೆಲಕಾಲ ಸ್ಥಗಿತಗೊಳಿಸಲಾಗಿದೆ.

 ಕಾಶ್ಮೀರದ ಬನಿಹಾಲ್ ನಲ್ಲಿ ಭದ್ರತಾ ಲೋಪದಿಂದಾಗಿ ಯಾತ್ರೆಯನ್ನು 20 ನಿಮಿಷ ಸ್ಥಗಿತಗೊಳಿಸಲಾಗಿತ್ತು. ಬಳಿಕ ಯಾತ್ರೆ ಮತ್ತೆ ಆರಂಭಿಸಲಾಯಿತು ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

 ಭಾರತ್ ಜೋಡೊ ಯಾತ್ರೆಗೆ ಭದ್ರತೆ ಒದಗಿಸಲು ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು ಜಮ್ಮು –ಕಾಶ್ಮೀರದ  ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version