ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ !

Prasthutha|

ಬೆಂಗಳೂರು: ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ, ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವಂತ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿಕೋರಿ, ಅರ್ಜಿ ಸಲ್ಲಿಸಿದ್ದಾರೆ.

- Advertisement -

ಇವರು 1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿದ್ದಾರೆ.


ಹಿರಿಯ ಐಪಿಎಸ್ ಅಧಿಕಾರಿಯಾಗಿರುವಂತ ಭಾಸ್ಕರ್ ರಾವ್ ಅವರು, ಇನ್ನೂ ಮೂರು ವರ್ಷ ಸರ್ವೀಸ್ ಇರುವಾಗಲೇ ಸ್ವಂಯ ನಿವೃತ್ತಿಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿ, ಐಜಿಪಿಗೆ ಪತ್ರದಲ್ಲಿ ಕೋರಿದ್ದಾರೆ. ಆದರೆ ಭಾಸ್ಕರ್ ರಾವ್ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

Join Whatsapp