ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಸಂಬಂಧ ಸುಪ್ರೀಂ ಕೋರ್ಟ್​‌ನಲ್ಲಿ ಇಂದು ವಿಚಾರಣೆ

Prasthutha|

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದು, ಈ ಸಂಬಂಧ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

- Advertisement -

ಅಪಹರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದುಕೊಂಡಿರುವ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಎಸ್‌ಐಟಿ ಅಧಿಕಾರಿಗಳು ಕದ ತಟ್ಟಿದ್ದರು. ಇಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಎಸ್‌ಐಟಿ ಮುಖ್ಯಸ್ಥ ಬಿಕೆ ಸಿಂಗ್, ಎಸ್ಪಿಪಿ ಜಗದೀಶ್, ಹಾಗೂ ತನಿಖಾಧಿಕಾರಿ ಹೇಮಂತ್ ಅವರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ವಿಚಾರಣೆ ವೇಳೆ ಹಿರಿಯ ವಕೀಲ ಕಪಿಲ್ ಸಿಬಲ್ ಎಸ್‌ಐಟಿ ಪರ ಹಾಜರಾಗುವ ಸಾಧ್ಯತೆಯಿದೆ.



Join Whatsapp
Exit mobile version