ಭೀಮಾ ಕೋರೆಗಾಂವ್ ಪ್ರಕರಣ: ಮಹೇಶ್ ರಾವತ್ ಗೆ ಜಾಮೀನು

Prasthutha|

ಮುಂಬೈ: 2018ರ ಭೀಮಾ ಕೋರೆಗಾಂವ್ ಗಲಭೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಹೋರಾಟಗಾರ ಮಹೇಶ್ ರಾವುತ್ ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

- Advertisement -


ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರ ವಿಭಾಗೀಯ ಪೀಠವು ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿ ರಾವುತ್ ಮಾಡಿದ ಮನವಿಯನ್ನು ಅಂಗೀಕರಿಸಿತು.


ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲ ತನ್ನ ಆದೇಶಕ್ಕೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದೆ. ನಂತರ ಪೀಠವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿತು.

Join Whatsapp