ಬೈಕ್-ಲಾರಿ ನಡುವೆ ಭೀಕರ ಅಪಘಾತ: ಶಿಕ್ಷಕರಿಬ್ಬರು ಮೃತ್ಯು

Prasthutha|

ವಿಜಯಪುರ: ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ವಿಜಯಪುರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

- Advertisement -

ಮೃತಪಟ್ಟವರನ್ನು ವಿಜಯಪುರ ‌ತಾಲೂಕಿನ ಬರಟಗಿ ಎಲ್.ಟಿ. ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್.ಹುದ್ದಾರ (58) ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ಬಗ್ಗೆ ಮಾಹಿತಿ ಪಡೆದ ನಗರ ಸಂಚಾರಿ ಪೊಲೀಸ್ ಠಾಣೆಯ ಪಿಎಸೈ ಸಂಜಯ ಕಲ್ಲೂರ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp