ಬಿಹಾರದಲ್ಲಿ ಸೇತುವೆ ಕುಸಿತ : ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ ಎಂದ ಡಿಸಿಎಂ ತೇಜಸ್ವಿ ಯಾದವ್

Prasthutha|

ಪಾಟ್ನಾ: ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.

- Advertisement -

ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿ, ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ ಕುಸಿದ ಬಳಿಕ ನಾವು ಐಐಟಿ-ರೂರ್ಕಿಯನ್ನು ಸಂಪರ್ಕಿಸಿದೆವು. ಇವರು ನಡೆಸಿದ ಅಂತಿಮ ವರದಿ ಇನ್ನೂ ಕೈಸೇರಬೇಕಿದೆ. ಆದರೆ ಸೇತುವೆಯ ರಚನೆಯನ್ನು ಅಧ್ಯಯನ ಮಾಡಿದ ತಜ್ಞರು ಗಂಭೀರ ದೋಷಗಳಿವೆ ಎಂದು ನಮಗೆ ತಿಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.

1,700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಈ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಿದ್ದೇವೆ ಎಂಬ ಡಿಸಿಎಂ ಹೇಳಿಕೆ ವಿಪಕ್ಷಗಳಿಗೆ ಆಹಾರವಾಗಿದ್ದು ಸರ್ಕಾರದ ವಿರುದ್ಧ ಭಾರೀ ಟೀಕೆಗಳು ಕೇಳಿ ಬರುತ್ತಿದೆ.

- Advertisement -

 ನಿರ್ಮಾಣದ ಹೊಣೆ ಹೊತ್ತಿರುವ ಎಸ್‍ಪಿ ಸಿಂಗ್ಲಾ ಕಂಪನಿ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಸಿಎಂ ನಿತೀಶ್ ಕುಮಾರ್ ಈಗಾಗಲೇ ಆದೇಶ ನೀಡಿದ್ದಾರೆ. ಬಳಿಕ ಡಿಸಿಎಂ ತೇಜಸ್ವಿ ಯಾದವ್ ಅವರ ಉದ್ದೇಶಪೂರ್ವಕವಾಗಿಯೇ ಉರುಳಿಸಿದ್ದೇವೆ ಎಂಬ ಹೇಳಿಕೆಯು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ಬಿದ್ದಿತ್ತು. ಏಪ್ರಿಲ್‌ನಲ್ಲಿ ಸುರಿದಿದ್ದ ಬಿರುಗಾಳಿ ಸಹಿತ ಭಾರೀ ಮಳೆಯ ಪರಿಣಾಮ ಸೇತುವೆಗೆ ಹಾನಿಯಾಗಿತ್ತು. ಏಪ್ರಿಲ್‌ನಲ್ಲಿ ಸೇತುವೆಗೆ ಹಾನಿಯಾಗಿದ್ದಾಗ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬಂದಿದ್ದವು. ಆದರೂ ಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿರಲಿಲ್ಲ. ಹೀಗಾಗಿ ನಿರ್ಮಾಣ ಹಂತದಲ್ಲಿದ್ದಾಗಲೇ ಸೇತುವೆ ಕುಸಿದಿದೆ.

3.16 ಕಿ.ಮೀ ಉದ್ದದ ಸೇತುವೆ ನಿರ್ಮಾಣದ ಕಾಮಗಾರಿಯ ಗುತ್ತಿಗೆಯನ್ನು ಹರ್ಯಾಣ ಮೂಲದ ಕಂಪನಿ ಗುತ್ತಿಗೆ ಪಡೆದುಕೊಂಡಿತ್ತು.

Join Whatsapp