ಬಿಹಾರ ಕಳ್ಳಬಟ್ಟಿ ಸಾರಾಯಿ ದುರಂತ| ಪ್ರಮುಖ ಆರೋಪಿ ಅರೆಸ್ಟ್

Prasthutha|

ಪಟ್ನಾ: ಬಿಹಾರದ ಸಾರಣ್‌ ಜಿಲ್ಲೆಯಲ್ಲಿ 38 ಮಂದಿಯ ಸಾವಿಗೆ ಕಾರಣವಾಗಿದ್ದ ಕಳ್ಳಬಟ್ಟಿ ಸಾರಾಯಿ ದುರಂತಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಕುರಿತು ಮಾಹಿತಿ ನೀಡಿದ ಸಾರಣ್‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್, ‘ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತನಿಖಾ ತಂಡವು, ಪ್ರಮುಖ ಆರೋಪಿ ಹೋಮಿಯೋಪಥಿ ಕಾಂಪೌಂಡರ್‌ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದೆ’ ಎಂದು ತಿಳಿಸಿದ್ದಾರೆ.

‘ಸಾರಾಯಿಯನ್ನು ಉತ್ತರಪ್ರದೇಶದಿಂದ ಬಿಹಾರದ ಸಾರಣ್‌ ಜಿಲ್ಲೆಗೆ ಸರಬರಾಜು ಮಾಡಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ನಕಲಿ ಮದ್ಯವನ್ನು ತಯಾರಿಸಲು ಬಳಸಲಾಗಿದ್ದ ರಾಸಾಯನಿಕಗಳ ಖಾಲಿ ಬಾಟಲಿಗಳನ್ನು ಸಹ ವಶಪಡಿಸಿಕೊಂಡಿದ್ದೇವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ SIT ಈ ಹಿಂದೆ ಒಂಬತ್ತು ಜನರನ್ನು ಬಂಧಿಸಿತ್ತು.

Join Whatsapp