Home ಟಾಪ್ ಸುದ್ದಿಗಳು ಬಿಹಾರ | ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕರಿಗೆ ಗಾಯ

ಬಿಹಾರ | ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕರಿಗೆ ಗಾಯ

ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.


ಮುಜಾಫರ್ ಪುರ-ಸಮಸ್ತಿಪುರ ಮಾರ್ಗದಲ್ಲಿ ಜೈನಗರದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ.


ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮಸ್ತಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸಮಸ್ತಿಪುರ ರೈಲ್ವೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಾಳಿಕೋರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕಲ್ಲುಗಳನ್ನು ಏಕೆ ಎಸೆಯಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

Join Whatsapp
Exit mobile version