ಸಿನಿಮೀಯ ರೀತಿಯಲ್ಲಿ ನಡೆದ ರಸ್ತೆ ಅಪಘಾತ । ಬೈಕ್ ಸವಾರ ಮೃತ್ಯು : ಸಿಸಿಟಿವಿಯಲ್ಲಿ ದೃಶ್ಯ ಸೆರೆ

Prasthutha|

ಮಂಗಳೂರು : ಪದವಿನಂಗಡಿ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ಸವಾರನೊಬ್ಬ ಆಕ್ಟೀವಾ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಿರಾಣಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ಪದವಿನಂಗಡಿಯಲ್ಲಿ ನಡೆದಿದೆ.

- Advertisement -

ಬೈಕ್ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿನಿಮೀಯ ಮಾದರಿಯಲ್ಲಿ ಬೈಕ್ ಸವಾರ ಹಾರಿ ಬಿದ್ದಿದ್ದಾನೆ. ಸಾವನ್ನಪ್ಪಿರುವ ಯುವಕನ್ನು ಪ್ರಶಾಂತ್(30) ಎಂದು ಗುರುತಿಸಲಾಗಿದೆ. ಪ್ರಶಾಂತ್ ಬೊಂದೆಲ್‌ ನ ಕೃಷ್ಣನಗರದ ನಿವಾಸಿ ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ.

- Advertisement -

Join Whatsapp