Home ಕರಾವಳಿ ಫರಂಗಿಪೇಟೆ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ಫರಂಗಿಪೇಟೆ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮಂಗಳೂರು: ಬೈಕ್ ಸವಾರನೋರ್ವ ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಾಗ ಆತನ ಮೇಲೆ ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ.

ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್(26) ಮೃತಪಟ್ಟರು ಎಂದು ಗುರುತಿಸಲಾಗಿದೆ.

ಇವರು ಮಂಗಳೂರಿನ NMPT ಕಂಪನಿಯ ಉದ್ಯೋಗಿಯಾಗಿದ್ದು, ಕಂಪನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.

ವೇಗವಾಗಿ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೆ.ಎಸ್.ಆರ್.ಟಿ.ಸಿ. ಬಸ್ ಅವರ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version