Home ಕರಾವಳಿ ಬೆಳ್ತಂಗಡಿ | ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು

ಬೆಳ್ತಂಗಡಿ | ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು

ಬೆಳ್ತಂಗಡಿ: ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಯ್ಯುರು ನಿವಾಸಿ ರಘು ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮುಂಡಾಜೆಯಿಂದ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಹುಲ್ಲು ಸಾಗಾಟದ ಪಿಕಪ್ ವಾಹನ ಢಿಕ್ಕಿಯಾದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ತುಂಡಾಗಿ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು. ಈ ವೇಳೆ ಇದರ ಅರಿವಿಲ್ಲದೆ ಸ್ಕೂಟರ್ ನಲ್ಲಿ ದಿಡುಪೆ ಕಡೆಯಿಂದ ಬರುತ್ತಿದ್ದ ರಘು ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡಿದ್ದು, ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version