ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

Prasthutha|

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ಜೈಲಿನಿಂದ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿದೆ.

- Advertisement -

ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು ತುರ್ತು ಪಟ್ಟಿ ಕೋರಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠವು ಈ ವಿಷಯವನ್ನು ಪರಿಶೀಲಿಸಲು ಒಪ್ಪಿಕೊಂಡಿತು.

ನಾವು ನಾವು ಅಪರಾಧಿಗಳಿಗೆ ನೀಡಿ ವಿನಾಯ್ತಿಯನ್ನು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನಲ್ಲ. ಯಾವ ತತ್ವಗಳ ಆಧಾರದ ಮೇಲೆ ಅಪರಾಧಿಗಳಿಗೆ ಕ್ಷಮಾಪಣೆ ನೀಡಲಾಗಿದೆ ಎಂಬುದನ್ನು ಮಾತ್ರ ನಾವು ಪ್ರಶ್ನಿಸುತ್ತಿದ್ದೇವೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.

- Advertisement -

ಈ ಮಧ್ಯೆ, ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಪಡಿಸಬೇಕು ಎಂದು ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ 6 ಸಾವಿರಕ್ಕೂ ಅಧಿಕ ನಾಗರಿಕರು ಇತ್ತೀಚೆಗೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಇದಕ್ಕೂ ಮುನ್ನ ಆಗಸ್ಟ್ 19 ರಂದು ತೆಲಂಗಾಣದ ಎಂಎಲ್ಸಿ ಕೆ.ಕವಿತಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರಿಗೆ ಪತ್ರ ಬರೆದು ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರದ ಪರಿಹಾರ ನೀತಿಯಡಿ ಬಿಡುಗಡೆ ಮಾಡುವ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.

Join Whatsapp
Exit mobile version